ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರದ ಬಂಪರ್ ಗಿಫ್ಟ್ : 56,000 ಹೊಸ ಹುದ್ದೆಗಳ ನೇಮಕಾತಿಗೆ ಮುಹೂರ್ತ ಫಿಕ್ಸ್!

vidhana soudha

ಧಾರವಾಡ : ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಯುವಜನತೆಗೆ ಸಚಿವ ಸಂತೋಷ್ ಲಾಡ್ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರವು ಶೀಘ್ರದಲ್ಲೇ ವಿವಿಧ ಇಲಾಖೆಗಳಲ್ಲಿ 56,000 ಹೊಸ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಿದೆ ಎಂದು ಅವರು ಘೋಷಿಸಿದ್ದಾರೆ.

ಧಾರವಾಡದ ಕರ್ನಾಟಕ ಕಾಲೇಜು (ಕೆಸಿಡಿ) ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಆಯೋಜಿಸಿದ್ದ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ಉದ್ಘಾಟಿಸಿ ಅವರು ಮಾತನಾಡಿದರು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಸರ್ಕಾರಿ ಕೆಲಸದಲ್ಲಿ ಭರ್ಜರಿ ಆದ್ಯತೆ; ರಾಜ್ಯ ಸರ್ಕಾರದ ಮಹತ್ವದ ಆದೇಶ!

ಇದನ್ನು ಮಿಸ್‌ ಮಾಡದೇ ಓದಿ : ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ವೇಳಾಪಟ್ಟಿ ಪ್ರಕಟ : ಜೂನ್ 14ಕ್ಕೆ ಭಾರತ-ಪಾಕ್ ಹೈವೋಲ್ಟೇಜ್ ಫೈಟ್!

ಸುದ್ದಿಯ ಮುಖ್ಯಾಂಶಗಳು:

56,000 ಹುದ್ದೆಗಳ ಭರ್ತಿ: ಬಜೆಟ್‌ನಲ್ಲಿ ಘೋಷಿಸಿದಂತೆ ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.

ಪ್ರತಿ 3 ತಿಂಗಳಿಗೊಮ್ಮೆ ಮೇಳ: ಜಿಲ್ಲಾ ಮಟ್ಟದಲ್ಲಿ ಇನ್ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ಉದ್ಯೋಗ ಮೇಳ ಆಯೋಜನೆ.

ಫೀಡ್‌ಬ್ಯಾಕ್ ಕಡ್ಡಾಯ: ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಂದ ಅಭಿಪ್ರಾಯ ಸಂಗ್ರಹಿಸಿ, ಪ್ರಕ್ರಿಯೆಯನ್ನು ಇನ್ನಷ್ಟು ಸುಧಾರಿಸಲು ಇಲಾಖೆಗೆ ಸೂಚನೆ.

ಈಗಾಗಲೇ 40,000 ನೇಮಕ: ಸರ್ಕಾರ ಈವರೆಗೆ ವಿವಿಧ ಹಂತಗಳಲ್ಲಿ 40 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.

ನೇರವಾಗಿ ಉದ್ಯೋಗದಾತರ ಭೇಟಿಗೆ ಅವಕಾಶ : ಉದ್ಯೋಗ ಮೇಳಗಳ ಮುಖ್ಯ ಉದ್ದೇಶ ಉದ್ಯೋಗಾಕಾಂಕ್ಷಿಗಳು ಮತ್ತು ಕಂಪನಿಗಳ ನಡುವೆ ನೇರ ಸಂಪರ್ಕ ಏರ್ಪಡಿಸುವುದಾಗಿದೆ. “ಸರ್ಕಾರ ಯುವಜನತೆಗೆ ಉದ್ಯೋಗ ನೀಡಲು ಬದ್ಧವಾಗಿದೆ. ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಬಗ್ಗೆ ನಿರಂತರ ನಿಗಾ ವಹಿಸಲಾಗುವುದು,” ಎಂದು ಸಂತೋಷ್ ಲಾಡ್ ತಿಳಿಸಿದರು.

ಗಣ್ಯರ ಉಪಸ್ಥಿತಿ: ಈ ಸಮಾರಂಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿ.ಪಂ ಸಿಇಒ ಭುವನೇಶ ಪಾಟೀಲ ಹಾಗೂ ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಧಾರವಾಡ ಜಿಲ್ಲೆಯ ನೂರಾರು ಯುವಕ-ಯುವತಿಯರು ಮೇಳದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಸಂದರ್ಶನ ಎದುರಿಸಿದರು.

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ರಾಜ್ಯ ಸರ್ಕಾರದ ಈ 56,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಶೀಘ್ರದಲ್ಲೇ ಅಧಿಕೃತ ಅಧಿಸೂಚನೆಯೊಂದಿಗೆ ಹೊರಬರಲಿದ್ದು, ಅಭ್ಯರ್ಥಿಗಳು ತಮ್ಮ ತಯಾರಿ ನಡೆಸುವಂತೆ ಸಚಿವರು ಕರೆ ನೀಡಿದ್ದಾರೆ.

RECENT NEWS