ಕೋಲಾರ: ಸ್ನೇಹಿತರ ಜೊತೆ ಬೆ**ಟ್ಟಿಂಗ್ ಕಟ್ಟಿ ನೀರು ಬೆರಸದೆ ಮ**ದ್ಯ ಕುಡಿದ ಯುವಕ ಸಾವನ್ನಪ್ಪಿರುವ ಘಟನೆ ಕೋಲಾರ ತಾಲ್ಲೂಕಿನ ಪೂಜಾರಹಳ್ಳಿ ನಡೆದಿದೆ.
ಮೃತ ಯುವಕನನ್ನು ಪೂಜಾರಹಳ್ಳಿ ಗ್ರಾಮದ ಕಾರ್ತೀಕ್ (21) ಅಂತ ತಿಳಿದು ಬಂದಿದೆ. ಕಾರ್ತೀಕ್ ನೀರು ಬೆರಸದೆ ಮ**ದ್ಯ ಸೇವಿಸುವುದಾಗಿ ಗ್ರಾಮದ ಸ್ನೇಹಿತರಾದ ವೆಂಕಟರೆಡ್ಡಿ, ಸುಬ್ರಮಣಿ ಹಾಗೂ ಇತರರೊಂದಿಗೆ ₹10 ಸಾವಿರ ಬೆಟ್ಟಿಂಗ್ ಕಟ್ಟಿದ್ದ ಎನ್ನಲಾಗಿದೆ.

ಈ ನಡುವೆ ಕಾರ್ತಿಕ್ ಐದಾರು ಚಿಕ್ಕ ಬಾಟಲ್ ಮ**ದ್ಯ ಸೇವಿಸಿ ಅಸ್ವಸ್ಥನಾಗಿದ್ದಾನೆ, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಅಲ್ಲಿ ಆತ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ: ನಾಳೆ SSLC Exam ಫಲಿತಾಂಶ ಪ್ರಕಟ..! ಫಲಿತಾಂಶ ಈ ರೀತಿ ಚೆಕ್ ಮಾಡಿ
ಈ ನಡುವೆ ಮ**ದ್ಯ ಕುಡಿ ಯಲು ಪ್ರಚೋದನೆ ನೀಡಿದ ಆರೋಪದ ಮೇಲೆ ಕಾರ್ತಿಕ್ ಸ್ನೇಹಿತನಾದ ವೆಂಕಟರೆಡ್ಡಿ, ಸುಬ್ರಮಣಿ ಹಾಗೂ ಇನ್ನೂ ನಾಲ್ವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು ಸದ್ಯ ಪೊಲೀಸರು ವೆಂಕಟರೆಡ್ಡಿ ಹಾಗೂ ಸುಬ್ರಮಣಿಯನ್ನು ವಶಕ್ಕೆ ಪಡೆದುಕೊಂಡಿದ್ದು, ತಲೆ ಮರೆಸಿಕೊಂಡಿರುವ ಉಳಿದ ಉಳಿದ ನಾಲ್ವರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಸದ್ಯ ನಂಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಂದ ಹಾಗೇ ಮೃತ ಕಾರ್ತಿಕ್, ಪತ್ನಿ ಹೆಣ್ಣು ಒಂಬತ್ತು ದಿನಗಳ ಹಿಂದೆಯಷ್ಟೇ ಆತನ ಮಗುವಿಗೆ ಜನ್ಮ ನೀಡಿದ್ದಳು ಎನ್ನಲಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರರ, ಅತಿಯಾದ ಮದ್ಯಪಾನದಿಂದ ಪ್ರತಿ ವರ್ಷ ಲಕ್ಷಾಂತರ ಜನರು ಸಾಯುತ್ತಿದ್ದಾರೆ ಎನ್ನಲಾಗಿದೆ. ಮದ್ಯಪಾನದ ಯಾವುದೇ “ಸುರಕ್ಷಿತ” ಮಟ್ಟವಿಲ್ಲ ಎಂದು ಹೇಳಿದೆ.
ಇದನ್ನು ಮಿಸ್ ಮಾಡದೇ ಓದಿ: ದೇಶದ ಜನತೆಗೆ ಗುಡ್ನ್ಯೂಸ್ ಕೆಂದ್ರ ಸರ್ಕಾರದಿಂದ LPG ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ..!
Follow Me