Allowance Increased: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಗುಡ್‌ನ್ಯೂಸ್: ಅಂತ್ಯಕ್ರಿಯೆ ಸಹಾಯಧನ ಹೆಚ್ಚಳ

Welfare Board Building and Other Construction Workers Welfare Board

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳೀಯು ನೋಂದಾಯಿತ ಫಲಾನುಭವಿಗಳು ಮರಣ ಹೊಂದಿದ್ದಲ್ಲಿ ನೀಡಲಾಗುತ್ತಿದ್ದ ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹ ರಾಶಿ ಸಹಾಯಧನ ಮೊತ್ತವನ್ನು ರೂ. 75,000/-ಗಳಿಂದ ರೂ 1,50,000/-ಗಳಿಗೆ ಹೆಚ್ಚಿಸಲಾಗಿದೆ. 

ಇದನ್ನು ಮಿಸ್‌ ಮಾಡದೇ ಓದಿ: UPI ಬಿಟ್ಟು ನಗದು ವ್ಯವಹಾರ ನಡೆಸುತ್ತಿರುವ ವರ್ತಕರಿಗೆ ಬಿಗ್‌ಶಾಕ್‌ ಕೊಟ್ಟ GST

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ನೋಂದಾಯಿತ ಫಲಾನುಭವಿಗಳು ಕೆಲಸದ ಸ್ಥಳಗಳಲ್ಲಿ ಅಪಘಾತ ಉಂಟಾಗಿ ಮರಣ ಹೊಂದಿದ್ದಲ್ಲಿ ನೀಡಲಾಗುತ್ತಿದ್ದ ಪರಿಹಾರದ ಮೊತ್ತವನ್ನು ರೂ. 5,00,000/-ಗಳಿಂದ ರೂ. 8,00,000/-ಗಳಿಗೆ ಹೆಚ್ಚಿಸಲಾಗಿದೆ ಎಂದು ಬೆಂಗಳೂರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳಾದ  ಭಾರತಿ ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vidhana soudha
Image / Twitter

ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಕೋರ್ಸಿಗೆ ಅರ್ಜಿ ಆಹ್ವಾನ: ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ 2025-26ನೇ ಸಾಲಿನ “ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್” ಕೋರ್ಸಿಗೆ DME / DTDM / BE (Mech /Indl.Engg. & Manufacturing / Indl.& Production, Automobile Engg. ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು ಮೊಬೈಲ್ ಸಂ: 9141629584/ 9880217473/ 8310987353 ವೆಬ್‍ಸೈಟ್ : https://gttc.karnataka.gov.in ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಎಂ-ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸಿಗೆ ಅರ್ಜಿ ಆಹ್ವಾನ: ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಐಸಿಟಿಇ ಯಿಂದ ಅನುಮೋದನೆಗೊಂಡು ವಿಟಿಯು ಗೆ ಸಂಯೋಜಿತಗೊಂಡಿರುವ “ಎಂ-ಟೆಕ್ ಇನ್ ಟೂಲ್ ಇಂಜಿನಿಯರಿಂಗ್” ಕೋರ್ಸಿಗೆ BE in Mechanical Engg./ Auto Mobile Engg. Automation & Robotics Engg./ Indl&Production Engg / Tool Engineering / Mechatronics Engg. ಕೋರ್ಸ್ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನು ಮಿಸ್‌ ಮಾಡದೇ ಓದಿ: ಯಾವುದೇ ಕಾರಣಕ್ಕೂ ‘ಪಂಚ ಗ್ಯಾರಂಟಿ’ ಯೋಜನೆ ನಿಲ್ಲುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ / ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು ಮೊಬೈಲ್ ಸಂ: 9141629584/9880217473/ 8310987353 ಹಾಗೂ ವೆಬ್‍ಸೈಟ್: https://gttc.karnataka.gov.in ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.