ಬಳ್ಳಾರಿ: ಬಳ್ಳಾರಿ (Ballari) ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ವ್ಯಾಪ್ತಿಯಲ್ಲಿ 110/11 ಕೆ.ವಿ ದಕ್ಷಿಣ ಉಪ ವಿದ್ಯುತ್ ವಿತರಣಾ ಕೇಂದ್ರದ ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.30 ರಂದು ಬೆಳಿಗ್ಗೆ 09 ಗಂಟೆಯಿAದ 05 ಗಂಟೆಯವರೆಗೆ 11 ಕೆ.ವಿ ಯ ಎಫ್-43 ಸಿದ್ಧಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ಧಾಪುರ ರಸ್ತೆ, ಕೈಗಾರಿಕಾ ಪ್ರದೇಶ ಸೇರಿದಂತೆ ಮುಂತಾದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ: ಮುನ್ನುಗ್ಗುತ್ತಿದೆ ಭಾರತ ; ಶೇ.8.2ರಷ್ಟು ‘GDP’ ಬೆಳವಣಿಗೆ

ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರÀದಲ್ಲಿ ತುರ್ತು ತ್ರೆöÊಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.30 ರಂದು ಬೆಳಿಗ್ಗೆ 09 ಗಂಟೆಯಿAದ 06 ಗಂಟೆಯವರೆಗೆ ಎಫ್-23, ಎಫ್-24, ಎಫ್-25, ಎಫ್-46, ಎಫ್-47, ಎಫ್-48 ಫೀಡರ್ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಬೆಂಗಳೂರು ರಸ್ತೆ, ಅಂದ್ರಾಳ್ ರಸ್ತೆ, ಕೊಲಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ್ ಪೇಟೆ, ಮೋತಿ ವೃತ್ತ, ತೇರು ಬೀದಿ, ಇಂಡಸ್ಟಿçಯಲ್ ಏರಿಯಾ ಹಂತ-1, ಮಹೇಶ್ ಪೈಪ್ಸ್, ಲಾರಿ ಟರ್ಮಿನಲ್, ಜೈನ್ ಮಾರ್ಕೆಟ್, ಸಾಯಿ ಕಾಲೋನಿ, ಎಪಿಎಮ್ಪಿ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರೋಡ್ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತ ನಾಮಕರಣ, ಪುತ್ಥಳಿ ನಿರ್ಮಾಣ: ಆಕ್ಷೇಪಣೇಗಳಿಗೆ ಆಹ್ವಾನ: ಬಳ್ಳಾರಿ: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.37 ರ ಎಸ್ಪಿ ವೃತ್ತಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ಎಂದು ನಾಮಕರಣ ಮಾಡಲು ಹಾಗೂ ವೃತ್ತದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಲಿಖಿತವಾಗಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬಹುದು. ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದೇ ಇದ್ದಲ್ಲಿ ಸರ್ಕಾರದ ಸುತ್ತೋಲೆಯ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













Follow Me