ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಅನುಮೋದನೆ ಪಡೆದುಕೊಳ್ಳಲಾಗಿದೆ. ಇಂದಿನಿಂದಲೇ ಶನಿವಾರದೊಳಗೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡಲಾಗುವುದು ಅಂತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಕೈ ಸೇರಲಿದೆ ಅಂತ ಹೇಳಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ: ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚ ಸುದೀಪ್ ದರ್ಶನ್ ಫ್ಯಾನ್ಸ್ ಸಮರ!
ಇದನ್ನು ಮಿಸ್ ಮಾಡದೇ ಓದಿ: ರೈಲ್ವೇ ಪ್ರಯಾಣಿಕರಿಗೆ ಬಿಗ್ಶಾಕ್: ಟಿಕೇಟ್ ದರದಲ್ಲಿ ಹೆಚ್ಚಳ

ಇದೇ ವೇಳೆ ಬೆಳಗಾವಿ ಜಿಲ್ಲೆ ವಿಭಜನೆ ಬೆಳವಣಿಗೆಯ ಕುರಿತು ಮಾತನಾಡಿದ ಅವರು, “ಜಿಲ್ಲೆ ವಿಭಜನೆ ಮಾಡಬೇಕು. ಹೊಸ ಜಿಲ್ಲೆ ಘೋಷಿಸೋಣ ಎನ್ನುವ ಮನಸ್ಸಿನಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಗೆ ಬಂದಿದ್ದರು. ಎಲ್ಲರನ್ನೂ ಕರೆದು ಮಾತನಾಡೋಣ ಎಂದಿದ್ದರು. ಎಲ್ಲರೂ ನಿಯೋಗ ತೆಗೆದುಕೊಂಡು ಬಂದಿದ್ದರಿಂದ ಜಿಲ್ಲೆ ವಿಭಜನೆ ಬಗ್ಗೆ ಇನ್ನೂ ಚಿಂತನೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ನಮ್ಮ ಜಿಲ್ಲೆ 15 ತಾಲೂಕು, 18 ವಿಧಾನಸಭಾ ಕ್ಷೇತ್ರ ಹೊಂದಿದೆ. ಬರುವ ದಿನಗಳಲ್ಲಿ ಹೊಸದಾಗಿ 3 ತಾಲೂಕು ಆಗುವ ಎಲ್ಲ ಲಕ್ಷಣಗಳಿವೆ. 2ರಿಂದ 3 ಜಿಲ್ಲೆ ಮಾಡಬೇಕೆನ್ನುವ ಬಗ್ಗೆ ನನ್ನ ಮತ್ತು ಸತೀಶ ಜಾರಕಿಹೊಳಿ ಅವರ ಮುಂದೆ ಮುಖ್ಯಮಂತ್ರಿಗಳು ಮೊದಲ ದಿನವೇ ಚರ್ಚಿಸಿದ್ದರು. ನಮ್ಮ ತಾಲೂಕು ಜಿಲ್ಲೆ ಆಗಬೇಕು ಅಂತಾ ಎಲ್ಲರೂ ಮುಖ್ಯಮಂತ್ರಿಗಳ ಬಳಿ ನಿಯೋಗ ತೆಗೆದುಕೊಂಡು ಬಂದರು. ಎಲ್ಲರಿಗೂ ಅವರ ತಾಲೂಕು ಜಿಲ್ಲೆ ಆಗಬೇಕು ಎನ್ನುವ ಆಸೆ ಸಹಜ. ಹಾಗಾಗಿ, ಅಳೆದು ತೂಗಿ ಜಿಲ್ಲೆ ವಿಭಜನೆ ಮಾಡುತ್ತಾರೆ ಅಂತ ಅವರು ಮಾಹಿತಿ ನೀಡಿದರು.
Good news for the beneficiaries of ‘Ghrilakshmi’: 24th installment will be deposited in the account from today.













Follow Me