ಬೆಂಗಳೂರು: ಬಳ್ಳಾರಿ ಜಿಲ್ಲೆಯ ಕಂಪ್ಲಿ ಶಾಸಕ ಗಣೇಶ ಹಾಗೂ ಜಿಲ್ಲೆಯ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಬಾಲ್ಯ ವಿವಾಹದವೊಂದರಲಲ್ಲಿ ಭಾಗಿಯಾಗಿ ಶುಭ ಕೋರಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ ಘಟನೆ ಸಂಬಂಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರ ಎನ್ನಲಾಗಿದೆ. ಇನ್ನೂ ಬಾಲ್ಯ ವಿವಾಹದ ಕುರಿತಂತೆ ಪ್ರಕರಣ ಹಲವು ಮಂದಿ ಪೊಲೀಸರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು ಎನ್ನಲಾಗಿದೆ. ಆದರೆ ಕೊನೆಗೆ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗುತ್ತಿದ್ದ ಹಾಗೇ ...