ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ. ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ...
ಬೆಂಗಳೂರು : ಶಿಕ್ಷಕರು ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ-ಸಮನ್ವಯತೆ-ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿ ಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇವರನ್ನು ವಂಧಿಸುವುದು ಉತ್ತಮ ಸಂಸ್ಕಾರ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ವಿಧ್ಯಾಭವನದಲ್ಲಿ ಆಯೋಜಿಸಿದ್ದ ಗುರುವಂಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು ಸಮಾಜಮುಖಿಯಾದ ಪ್ರಜೆಗಳನ್ನು ಸೃಷ್ಟಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎನ್ನುವುದಕ್ಕೆ ಈ ಗುರುವಂಧನಾ ಕಾರ್ಯಕ್ರಮವೇ ಸಾಕ್ಷಿ. 25 ವರ್ಷಗಳ ಹಿಂದೆ ನಿಮ್ಮಿಂದ ತಿದ್ದಿ ಬೆಳೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ವಂಧಿಸುವ ಮೂಲಕ ...
ಬೆಂಗಳೂರು: ಮೇ 6 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಮಂಡ್ಯದಲ್ಲಿ ಮೇ 6 ರವರೆಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಗದಗ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಬೆಳಗಾವಿ, ಧಾರವಾಡ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಅಂತ ತಿಳಿಸಿದೆ. ಏಪ್ರಿಲ್ 30ರಂದು ಬೆಂಗಳೂರಿನಲ್ಲಿ ...
ಬೆಂಗಳೂರು: ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ...
ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ನಡೆಸುವ ನರ್ಸಿಂಗ್ ನೇಮಕಾತಿ ಪರೀಕ್ಷೆಗೆ ಹಾಜರಾಗುವಾಗ ಅಭ್ಯರ್ಥಿಗಳು ‘ಮಂಗಳಸೂತ್ರ’ ಮತ್ತು ಇತರ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅನುಮತಿಸುವುದಿಲ್ಲ ಎಂಬ ಸೂಚನೆಗಳ ಬಗ್ಗೆ ವ್ಯಾಪಕ ಟೀಕೆಗಳ ನಂತರ, ಕೇಂದ್ರ ಸಚಿವಾಲಯ ಸೋಮವಾರ ಅವುಗಳನ್ನು ಮಾರ್ಪಡಿಸಿದೆ ಮತ್ತು ಅದಕ್ಕೆ ಅನುಮತಿ ನೀಡುವ ಸ್ಪಷ್ಟೀಕರಣವನ್ನು ನೀಡಿದೆ. ಜನಿವಾರ (‘ಪವಿತ್ರ ದಾರ’) ಧರಿಸಿ ಸಿಇಟಿ ಪರೀಕ್ಷೆ ಬರೆಯಲು ಒಂದೆರಡು ವಿದ್ಯಾರ್ಥಿಗಳಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಪಕ್ಷವು ಇತ್ತೀಚೆಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮೇಲೆ ದಾಳಿ ನಡೆಸಿದ್ದರಿಂದ ಈ ವಿಷಯವು ಬಿಜೆಪಿಗೆ ಮುಜುಗರವನ್ನುಂಟು ಮಾಡಿತ್ತು. ...
ಬೆಂಗಳೂರು: ತಿಮ್ಮಾಪುರ್ಗೆ ಚಡ್ಡಿ ಬಿಚ್ಚಿ ಚೆಕ್ ಮಾಡ್ಬೇಕಿತ್ತು ಅಂತ ಅಬಕಾರಿ ಸಚಿವ ಆರ್ ಬಿ ತಿಮ್ಮಪುರ್ ಬಗ್ಗೆ ಸಂಸದ ತೇಜಸ್ವಿ ಸೂರ್ಯ ವಿವಾದತ್ಮಕ ಹೇಳಿಕೆ ನೀಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ, ಅವರು ಅಬಕಾರಿ ಸಚಿವ ಆರ್ ಬಿ ತಿಮ್ಮಪುರ್ ಹಿಂದೂಗಳೆಂದು ನೋಡಿ ಕೊಲೆ ಮಾಡಿಲ್ಲ ಅಂತ ಹೇಳಿದ್ದ ಹೇಳಿಕೆ ಸಂಬಂಧಪಟ್ಟಂತೆ ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, ಪಕ್ಕದ ರಾಜ್ಯದಲ್ಲಿ ಆನೆ ದಾಳಿಗೆ ಬಲಿಯಾದವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡುತ್ತದೆ, ಅದೇ ನಮ್ಮ ರಾಜ್ಯದ ಜನ ...
ಬೆಂಗಳೂರು: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ 19,20 ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಮಹತ್ವದ ಮಾಹಿತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ.ಕಳೆದ ಮೂರು ತಿಂಗಳಿನಿಂದ 19,20 ನೇ ಕಂತಿನ ಹಣಕ್ಕಾಗಿ ರಾಜ್ಯದ ಮಹಿಳೆಯರು ಕಾಯುತ್ತಿರುವುದು ನಿಮಗೆಲ್ಲ ತಿಳಿದಿದೆ. ಗೃಹಲಕ್ಷ್ಮಿ ಯೋಜನೆಯ ಹಣದಿಂದ ಹಲವು ಮಂದಿ ಮಹಿಳೆಯರು ತಮ್ಮ ಜೀವನವನ್ನು ಕಟ್ಟಿಕೊಳ್ಳುತ್ತಿದ್ದು, ಹಲವು ಮಂದಿ ಹಸು, ಆಡು ಸೇರಿದಂತೆ ತಮ್ಮಜೀವನಕ್ಕಾಗಿ ಬೇಕಾಗುವ ವಸ್ತುಗಳನ್ನು ಖರೀದಿ ಮಾಡಿರುವುದು ಕೂಡ ಉಂಟು. ಈ ನಡುವೆ ಬಾಕಿ ಉಳಿದಿರುವ ಎರಡು ...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ನೀಡಿದ್ದು, ಅದರಂತೆ, `ಮೇ.20 ರೊಳಗೆ ಆರೋಗ್ಯ ಸಂಜೀವಿನಿ’ ನೊಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ ಸಂಜೀವಿನಿ (ಏಂSS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ಬಗ್ಗೆ ಹಾಗೂ ಯೋಜನೆಯಡಿ ಸರ್ಕಾರಿ ನೌಕರರ ನೋಂದಾವಣೆ ಮತ್ತು ಆಯ್ಕೆ ಕುರಿತು ಸೂಚನೆಗಳನ್ನು ನೀಡಿದೆ. ಸುತ್ತೋಲೆಯಲ್ಲಿ ಉಲ್ಲೇಖ ಮಾಡಿರುವಂತೆ, ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ...
ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಪ್ರಾಥಮಿಕ ಮೂಲಗಳ ಪ್ರಕಾರ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು ಎನ್ನಲಾಗಿದ್ದು, ಅವರ ವಾಸವಿದ್ದ ಮನೆಯಲ್ಲಿಯೇ ಕೊಲೆಯಾಗಿ ಸಾವನ್ನಪ್ಪಿದ್ದಾರೆ ಅಂತ ತಿಳಿದು ಬಂದಿದೆ. ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಅಂತ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಘಟನ ಸ್ಥಳಕ್ಕೆ ಎಚ್ಎಸ್ಆರ್ ಲೇಔಟ್ ಸಿಬ್ಬಂದಿ ಭೇಟಿ ನೀಡಿದ್ದು, ಸದ್ಯ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ತಿಳಿಸಲಾಗಿದೆ. ಸದ್ಯ ಘಟನ ಸ್ಥಳಕ್ಕೆ ...
Follow Me