ರಾಯಚೂರು : ಮೀಸ್ಟರ್ ಕಲ್ಯಾಣ ಕರ್ನಾಟಕ 2026 ರಾಜ್ಯಮಟ್ಟದ ಪುರುಷರ ದೇಹದಾರ್ಢ್ಯ ಸ್ಪರ್ಧೆಯು ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 28ರ ಸಂಜೆ 4 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಸಕ್ತ ದೇಹದಾರ್ಢ್ಯ ಪಟುಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು ಉತ್ಸವ: ಜನವರಿ 27ರ ಬೆಳಗ್ಗೆ 6 ಗಂಟೆಗೆ ಸೈಕಲ್ ಮ್ಯಾರಾಥಾನ್ : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ನಿಮಿತ್ತ ಜಿಲ್ಲಾಡಳಿತದಿಂದ ಜನವರಿ 27ರ ಬೆಳಗ್ಗೆ 6 ಗಂಟೆಗೆ ಸೈಕಲ್ ಮ್ಯಾರಾಥಾನ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ.
ಈ ಸೈಕಲ್ ಮ್ಯಾರಾಥಾನ್ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಿAದ ಆರಂಭವಾಗಿ ಬಸವೇಶ್ವರ ಸರ್ಕಲ್, ಲಿಂಗಸುಗೂರು ರೋಡ್, ಯಕ್ಲಾಸಪುರ್, ಯರಮರಸ್, ಬೈಪಾಸ್, ಓಪೆಕ್ ಆಸ್ಪತ್ರೆ, ಗಂಜ್ ಸರ್ಕಲ್, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪುವುದು. ಈ ಸ್ಪರ್ಧೆಯಲ್ಲಿ ವಿಜೇತರಾಗುವ ಸ್ಪರ್ಧಾಳುಗಳಿಗೆ ಪ್ರಥಮ ಬಹುಮಾನ 10 ಸಾವಿರ ರೂ. ಹಾಗೂ ದ್ವಿತೀಯ ಬಹುಮಾನ 5 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Raichur Utsav: Body Building Competition on 28th January