ಬಿಪಿಎಲ್ ಕಾರ್ಡ್ ಆದಾಯ ಮಿತಿ 1.80 ಲಕ್ಷಕ್ಕೆ ಏರಿಕೆ

BPL CARD NEW
BPL CARD NEW

ಬೆಳಗಾವಿ: ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ಇದನ್ನು ಮಿಸ್‌ ಮಾಡದೇ ಓದಿ: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್‌ ಆಯ್ಕೆ…!

ಇದನ್ನು ಮಿಸ್‌ ಮಾಡದೇ ಓದಿ: ಈ ಬಟ್ಟೆ ಧರಿಸಿ ಕಚೇರಿ ಬರಬೇಡಿ: ರಾಜ್ಯ ಸರಕಾರಿ ನೌಕರರಿಗೆ ಮಹತ್ವದ ಸೂಚನೆ….!

ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು.

minister muniyappa
minister muniyappa

ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ ಹೊಲಿಸಿದರೆ ಶೇ.73 ರಷ್ಟು ಕುಟುಂಬಗಳು ಬಿ.ಪಿ.ಎಲ್ ಕಾರ್ಡು ಪಡೆದಿವೆ. ರಾಜ್ಯವು ಜಿ.ಎಸ್.ಟಿ ಪಾವತಿ, ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶವನ್ನು ಪರಿಗಣಿಸಿದರೆ ಬಿ.ಪಿ.ಎಲ್. ಕುಟುಂಬಗಳ ಪ್ರಮಾಣ ಶೇ.50 ರಷ್ಟು ಇರಬೇಕಿತ್ತು. ಆದರೆ ಇದಕ್ಕೂ ಹೆಚ್ಚಿನ ಕುಟುಂಬ ಬಿ.ಪಿ.ಎಲ್. ಕಾರ್ಡು ಪಡೆದಿವೆ. ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಹಾಗೂ ಹೊರಗಿಡುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಿದೆ. ಇದರ ಅನ್ವಯ ಸರ್ಕಾರಿ, ಅನುದಾನಿತ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಆದಾಯ, ಸೇವಾ ಹಾಗೂ ಜಿ.ಎಸ್.ಟಿ ತೆರಿಗೆ ಪಾವತಿ ಮಾಡುವ ಕುಟುಂಬಗಳಿಗೆ ಬಿ.ಪಿ.ಎಲ್ ಕಾರ್ಡ್ ನೀಡುವುದಿಲ್ಲ. ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿ.ಪಿ.ಎಲ್.ಕಾರ್ಡುಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

minister muniyappa

ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿ.ಪಿ.ಎಲ್ ಕಾರ್ಡು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿ.ಪಿ.ಎಲ್ ಕಾರ್ಡು ರದ್ದಾಗಿದ್ದರೆ, ಬಾದಿತ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ ಎನ್ನುವ ಕಾರಣ ನೀಡಿ, ಸಂಬಂದಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ 15 ದಿನದ ಒಳಗಾಗಿ ಬಿ.ಪಿ.ಎಲ್ ಕಾರ್ಡು ನೀಡಲಾಗುವುದು. ಬಂಟ್ವಾಳ ಕ್ಷೇತ್ರದಲ್ಲಿ 2023-24ನೇ ಸಾಲಿನವರೆಗೆ ರೂ.48,715 ಕುಟುಂಬಗಳಿಗೆ ಬಿ.ಪಿ.ಎಲ್ ಕಾರ್ಡು ನೀಡಲಾಗಿದೆ. 2023 ರಿಂದ ಜನವರಿ 2025ವರೆಗೆ ಒಟ್ಟು 688 ಬಿ.ಪಿ.ಎಲ್ ಕಾರ್ಡು ವಿತರಿಸಲಾಗಿದೆ. 99 ಕುಟಂಬಗಳ ಬಿ.ಪಿ.ಎಲ್ ಕಾರ್ಡು ರದ್ದುಪಡಿಸಲಾಗಿದೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 930 ಬಿ.ಪಿ.ಎಲ್ ಕಾರ್ಡುಗಳನ್ನು ಎ.ಪಿ.ಎಲ್ ಕಾರ್ಡುಗಳಾಗಿ ಪರಿವರ್ತಿಸಲಾಗಿದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 964 ಹೊಸ ಬಿ.ಪಿ.ಎಲ್ ಕಾರ್ಡು ನೀಡುವ ಅರ್ಜಿಗಳು ಬಾಕಿಯಿವೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಕೃಷ್ಣ.ಸಿ.ಎನ್ ಅವರು ಸಚಿವರಲ್ಲಿ ಕೋರಿದರು.