Karnataka Weather BREAKING: ಬೆಂಗಳೂರಿನಲ್ಲಿ ಭಾರಿ ಮಳೆ: ಆಟೋ ಮೇಲೆ ಮರ ಬಿದ್ದು ಚಾಲಕ ದುರ್ಮರಣ…!

kannadanadulogo

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕತ್ರಿಗುಪ್ಪೆ ಬಳಿ ಇರುವ ಎಂ ಎಂ ಬಾರ್ ಬಳಿ ಈ ಅವಘಡ ನಡೆದಿದ್ದು, ಘಟನೆಯಲ್ಲಿ ಮರದ ಕೆಳಗೆ ಇದ್ದ ಆಟೋದ ಮೇಲೆ ಮರ ಕೊಂಬೆ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

karnataka weather

ಅಂದ ಹಾಗೇ ಮೇ 6 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಮಂಡ್ಯದಲ್ಲಿ ಮೇ 6 ರವರೆಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನ ಗದಗ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಬೆಳಗಾವಿ, ಧಾರವಾಡ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಅಂತ ತಿಳಿಸಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ: ನೀವು ಮಲಗುವ ಮುನ್ನ ಮಿಸ್‌ ಮಾಡದೇ ಈ ಹಣ್ಣನ್ನು ತಿನ್ನಿ..!

karnataka weather

ಮೇ 1 ರಿಂದ ಮೇ 3 ರವರೆಗೆ ಬೆಂಗಳೂರು ನಗರ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನಂತರ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮುಂಗಾರು ಪೂರ್ವ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನು ಮಿಸ್ ಮಾಡದೇ ಓದಿ : 2025: ಮೇ ತಿಂಗಳ ಬ್ಯಾಂಕ್ ರಜೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ…!

ದಯವಿಟ್ಟು ಗಮನಿಸಿ: ಕನ್ನಡ ನಾಡು ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಓದುಗರಿಗೆ ನೀಡುವುದಿಲ್ಲ