ಮಡಿಕೇರಿ: ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಏಪ್ರಿಲ್, 28 ರಂದು 11 ಗಂಟೆಗೆ ನಡೆಯಲಿದೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷರ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದೆ. ಏ.28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ನಂತರ ಪರಿಶೀಲನಾ ಕಾರ್ಯ ನಡೆಯಲಿದ್ದು, ವಾಪಸ್ ತೆಗೆದುಕೊಳ್ಳಲು ಕಾಲಾವಕಾಶ ಕೊಡಲಾಗುವುದು. ನಂತರ ಕೈಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಬಹುದು ಎಂದು ಚುನಾವಣಾಧಿಕಾರಿ ವಿನಾಯಕ ನರ್ವಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸಾಂತ್ವನ ಕೇಂದ್ರ; 5411 ಪ್ರಕರಣ ಇತ್ಯರ್ಥ: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನವೆಂಬರ್, 04 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪತ್ರಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆ ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ.

ಸಾಂತ್ವನ ಕೇಂದ್ರದಲ್ಲಿ ಈವರೆಗೆ 5419 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5411 ಪ್ರಕರಣಗಳು ಇತ್ಯರ್ಥ ಗೊಂಡಿದೆ. 2024-25 ನೇ ಆರ್ಥಿಕ ಸಾಲಿನಲ್ಲಿ 301 ಪ್ರಕರಣಗಳು ದಾಖಲಾಗಿ, 293 ಪ್ರರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 8 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ.
ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ. 12,00,500 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ.
ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಕೆ.ಎಸ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್.ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9880985939 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.
ಫೆಲೋಶಿಪ್ಗೆ ಅರ್ಜಿ ಆಹ್ವಾನ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು 2024-25 ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ ಫೆಲೋಶಿಪ್ ನೀಡಲಾಗುತ್ತದೆ.
ಕನಕದಾಸರ ಮುಂಡಿಗೆ ಸಾಹಿತ್ಯ-ತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯ-ತಾತ್ವಿಕ ಅಧ್ಯಯನ, ಕನ್ನಡದಲ್ಲಿ ಕೀರ್ತನ ಸಾಹಿತ್ಯದ ಸಮಾಜೋ-ಸಾಂಸ್ಕøತಿಕ ಅಧ್ಯಯನ ಈ ವಿಷಯಗಳ ಕುರಿತು ಅಧ್ಯಯನ ನಡೆಸಬೇಕು. 12 ತಿಂಗಳ ಅವಧಿಯ ಈ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ ಯುವ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರವನ್ನು ಒಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯ ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಅಕರ ಸಾಮಾಗ್ರಿಒಳಗೊಂಡ ಸಂಕ್ಷಿಪ್ತ ಮಾಹಿತಿಯಿರುವ ಸಾರಲೇಖವನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ಆಸಕ್ತಿಯಿರುವ 20 ರಿಂದ 55 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಯನ್ನು ಅಧ್ಯಯನ ಕೇಂದ್ರ ಇ-ಮೇಲ್ಗೆ ಅಥವಾ ಅಂಚೆ ಮೂಲಕ ಕಳುಹಿಸಬಹುದು.

ಅರ್ಜಿ ಸಲ್ಲಿಸಲು ಮೇ, 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ದೂ.ಸಂ.080-22113147 ಹಾಗೂ 6364529319 ನ್ನು ಸಂಪರ್ಕಿಸಬಹುದು. ಇ-ವಿಳಾಸ [email protected] ಮತ್ತು ವೆಬ್ಸೈಟ್ https://kanakadasaresearchcenter.karnataka.gov.in ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ತಿಳಿಸಿದ್ದಾರೆ.
Follow Me