ದಾವಣಗೆರೆ : ರಾಜ್ಯದಲ್ಲಿ ಈಗಾಗಲೇ ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಚರ್ಚೆ ಜೋರಾಗಿದ್ದು, ಯಾವಾಗ ರಾಹುಲ್ ಗಾಂಧಿ ಅವರನ್ನು ಮೈಸೂರು ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಭೇಟಿ ಮಾಡಿದರೋ ಇದಕ್ಕೆ ಮತ್ತಷ್ಟು ಪುಷ್ಟಿ ನೀಡಲಾಯಿತು.
ಇದನ್ನು ಮಿಸ್ ಮಾಡದೇ ಓದಿ : ಐಫೋನ್ 17 ರೂ. 47,990 ಬೆಲೆಗೆ, ಐಫೋನ್ 15 ರೂ. 31,990 ಮತ್ತು ಇತರ ಬೆಲೆಗಳಿಗೆ ಲಭ್ಯ
ಇದನ್ನು ಮಿಸ್ ಮಾಡದೇ ಓದಿ : ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ದಿನಾಂಕ, ಸಮಯ, ಇತರೆ ಮಹಿತಿ ಇಲ್ಲಿದೆ
ಇದೀಗ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಅಭಿಮಾನಿಗಳು ಘೋಷಣೆ ಕೂಗಿದ ವಿಚಾರವಾಗಿ, ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಅಭಿಮಾನದಿಂದ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಾರೆ. 2028ಕ್ಕೆ ಸಿಎಂ ಆಕಾಂಕ್ಷಿ ಎಂದು ಹೇಳಿದ್ದೇನೆ ಹೊರತು ಈಗ ನಾನು ಮುಖ್ಯಮಂತ್ರಿ ಅಂತ ಹೇಳಿಲ್ಲ ಎಂದು ಅವರು ತಿಳಿಸಿದರು.

ನಾನು ಏನಿದ್ದರೂ ಮುಂದಿನ ಚುನಾವಣೆಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಅಸ್ಸಾಂ ಚುನಾವಣೆ ಹಾಗೂ ಜಿಬಿಎ ಚುನಾವಣೆ ಸಹ ಬಂದಿದೆ. ಸಿಎಂ ಬದಲಾವಣೆ ಚರ್ಚೆ ನಿಲ್ಲಿಸುವುದು ಸೂಕ್ತ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಏನೋ ಕೆಲಸ, ಇರುತ್ತೆ ಹಾಗಾಗಿ ದೆಹಲಿಗೆ ಹೋಗುತ್ತಾರೆ. ಏನೇ ಇದ್ದರೂ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಗೋಪೇನಹಳ್ಳಿ ಗ್ರಾಮದಲ್ಲಿ ಹೇಳಿದರು.
I am an aspirant for the post of Chief Minister in the 2028 elections, says Minister Satish Jarkiholi