ಕಲಬುರ್ಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ.
ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ದುರ್ಮರಣ ಹೊಂದಿದ್ದಾರೆ. ಜೇವರ್ಗಿ ಬಳಿಯಲ್ಲಿ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ: ಕರ್ನಾಟಕದಲ್ಲಿ `ಅನುಕಂಪದ ಆಧಾರದ ಮೇಲೆ ನೇಮಕಾತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಇದನ್ನು ಮಿಸ್ ಮಾಡದೇ ಓದಿ: ಕೆಪಿಎಸ್ಸಿಯಿಂದ ಭೂಮಾಮಾಪಕರ ಹುದ್ದೆಗಳ ಅಧಿಸೂಚನೆ ರದ್ದು
ಕಾರು ಅಪಘಾತದಲ್ಲಿ ಜೇವರ್ಗಿ ಬಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಅಂದಹಾಗೇ ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರಸ್ತುತ ಬೆಸ್ಕಾಂ ಎಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಉತ್ತಮ ಅಧಿಕಾರಿಯೆಂದೇ ಗುರ್ತಿಸಿಕೊಂಡಿದ್ದಂತ ಮಹಾಂತೇಶ್ ಬೀಳಗಿ ಇಂದು ಅಪಘಾತದಲ್ಲಿ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.

ಕರ್ನಾಟಕ ಕೇಡರ್ನ 2012 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಮಹಾಂತೇಶ್ ಬೀಳಗಿ, ರಾಮದುರ್ಗದವರಾಗಿದ್ದು, ಕೆಎಸ್ಎಂಸಿಎಲ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ದಾವಣಗೆರೆಯ ಉಪ ಆಯುಕ್ತ ಮತ್ತು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ನಗರಾಭಿವೃದ್ಧಿ, ಕುಂದುಕೊರತೆ ಪರಿಹಾರ ಮತ್ತು ವಿದ್ಯುತ್ ಸರಬರಾಜು ನಿರ್ವಹಣೆಯನ್ನು ಸುಧಾರಿಸುವಲ್ಲಿ ಹೆಸರುವಾಸಿಯಾದ ಬಿಲಗಿ, ನಾಗರಿಕ ಸೇವೆಗಳಿಗೆ ಸೇರುವ ಮೊದಲು ಧಾರವಾಡದಲ್ಲಿ ಇಂಗ್ಲಿಷ್ ಬೋಧಕರಾಗಿಯೂ ಕೆಲಸ ಮಾಡಿದ್ದರು.
IAS officer Mahantesh Bilagi dies in car accident













Follow Me