ಶಿವಮೊಗ್ಗ: ಪ್ರಧಾನ ಮಂತ್ರಿ ಮತ್ಯ್ಸ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ

Prime Minister Matsya Sampada and the Blue Revolution

ಶಿವಮೊಗ್ಗ: ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಯ್ಸ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಮೀನು ಕೃಷಿಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯ, ಸೈಕಲ್ ವಿತ್ ಐಸ್‌ಬಾಕ್ಸ್, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕೆ ಘಟಕ (ಪ.ಜಾ) ಮತ್ತು ಹೊಸತಾದ ಮೀನುಮಾರಾಟದ ಕಿಯೋಸ್ಕ್ ನಿರ್ಮಾಣಕ್ಕಾಗಿ ಸಹಾಯ ಧನ ನೀಡಲಾಗುತ್ತಿದ್ದು, ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.

Prime Minister Matsya Sampada and the Blue Revolution

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪೂರ್ಣ ದಾಖಲೆಗಳೊಂದಿಗೆ ಮೇ 13 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮಂಡಗದ್ದೆ: ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ; ಎಚ್ಚರಿಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ 1×10 ಎಂವಿಎ ಶಕ್ತಿ ಪರಿವರ್ತಕ ಹಾಗೂ ಉದ್ದೇಶಿತ 110 ಕೆವಿ ಲಿಲೋ ಮಾರ್ಗವನ್ನು ಈಗಿರುವ ಶಿವಮೊಗ್ಗ- ಸೌತ್ ಕೆನರಾ ಲೈನ್ ವಿದ್ಯುತ್ ಮಾರ್ಗದಿಂದ ಮಂಡಗದ್ದೆ ವಿದ್ಯುತ್ ಉಪಕೇಂದ್ರದವರೆಗೆ ಸುಮಾರು 20 ಮೀಟರ್ ಪ್ರಸರಣ ಮಾರ್ಗವನ್ನು ನಿರ್ಮಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಏ.30 ರಂದು ಅಥವಾ ನಂತರದ ದಿನಗಳಲ್ಲಿ ಯಾವುದೇ ಕ್ಷಣದಲ್ಲಿಯಾದರೂ ಈ ಮಾರ್ಗವನ್ನು ಚಾಲನೆಗೊಳಿಸಲಾಗುವುದು.

Mescom_official
Image Credit to Original Source

ಸಾರ್ವಜನಿಕರು ಈ ಮಾರ್ಗದಲ್ಲಿ ಬರುವ ಗೋಪುರಗಳನ್ನು ಹತ್ತುವುದಾಗಲಿ, ದನಕರುಗಳನ್ನು ಕಟ್ಟುವುದಾಗಲಿ ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದಾಗಲಿ ನಿಷೇಧಿಸಲಾಗಿದೆ. ಹಾಗೂ ಈ ಕೃತ್ಯದಿಂದ ಉಂಟಾಗುವ ಪರಿಣಾಮಗಳಿಗೆ ಅವರೇ ನೇರ ಹೊಣೆಗಾರರಾಗಿದ್ದು, ಕವಿಪ್ರನಿನಿಯು ಯಾವುದೇ ಜವಾಬ್ದಾರಿಯಾಗಿರುವುದಿಲ್ಲ ಹಾಗೂ ಪರಿಹಾರವನ್ನು ನೀಡುವುದಿಲ್ಲವೆಂದು ಶಿವಮೊಗ್ಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಯೋಜನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.