ಪಾಕಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ : ಸಿಇಓ ಗಿತ್ತೆ ಮಾಧವ ವಿಠ್ಠಲ್‍ರಾವ್

Prize distribution to the winners of the cooking competition: CEO Gitte Madhava Vithalrao

ದಾವಣಗೆರೆ : ರುಚಿ ರುಚಿಯಾದ ವಿವಿಧ ಸಿರಿಧಾನ್ಯ ಪಾಕಗಳನ್ನು ಸವಿದಿದ್ದು, ಪ್ರತಿಯೊಂದು ಪದಾರ್ಥಗಳು ರುಚಿಕರವಾಗಿದ್ದು ಬಾಯಿಯಲ್ಲಿ ನೀರೂರಿಸಿದವು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠಲರಾವ್ ಅವರು ತಿಳಿಸಿದರು.

ಅವರು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಮಂಗಳವಾರ ಆಯೋಜಿಸಲಾದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2026ರ ಅಂಗವಾಗಿ ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಉದ್ಪಾಟಿಸಿ ಮಾತನಾಡಿದರು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಸೇವಾ ಅವಧಿಯಲ್ಲಿ ನಾನು ಅನೇಕ ಪಂಚತಾರಾ ಹೋಟೆಲ್‍ಗಳಲ್ಲಿ ವಿವಿಧ ಪದಾರ್ಥಗಳನ್ನು ಸವಿದಿದ್ದೇನೆ, ಆದರೆ ಇಷ್ಟು ರುಚಿಕರವಾದ ಪದಾರ್ಥಗಳನ್ನು ಸವಿದಿರಲಿಲ್ಲ. ಇಂದಿನ ಪದಾರ್ಥಗಳು ಯಾವ ಪಂಚತಾರಾ ಹೋಟೆಲ್‍ಗಳಿಗಿಂತ ರುಚಿಯಲ್ಲಿ ಕಡಿಮೆ ಇರÀಲಿಲ್ಲ. ಇಲ್ಲಿನ ಪದಾರ್ಥಗಳನ್ನು ಸವಿಯುವಾಗ ನನಗೆ ನನ್ನ ಬಾಲ್ಯದ ಪದಾರ್ಥಗಳನ್ನು ಸವಿಯುತ್ತಿದ್ದ್ದ ನೆನಪಿಗೆ ಬಂದವು. ಸಿರಿಧಾನ್ಯದಲ್ಲಿ ಇಷ್ಟು ಬಗೆಯ ಆಹಾರ ಖಾದ್ಯಗಳನ್ನು ತಯಾರಿಸಿರುವುದು ಹೆಮ್ಮೆ ಎನಿಸುತ್ತಿದೆ. ಇಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರು ವಿಜೇತರೆ, ಬಹುಮಾನ ಪಡೆದವರು ಮಾತ್ರ ವಿಜೇತರಲ್ಲ ಎಂದರು.

ಜಿಲ್ಲೆಯಲ್ಲಿ ಅನೇಕ ಮಹಿಳೆಯರು ತಮ್ಮ ಕೈಚಳಕದೊಂದಿಗೆ ಗುಣಮಟ್ಟದ ಖಾದ್ಯ ತಯಾರಿಸುತ್ತಿದ್ದೀರಿ. ಇದು ಕೇವಲ ಹವ್ಯಾಸಕ್ಕೆ ಬಳಕೆಯಾಗದೇ, ಪ್ರತಿಯೊಬ್ಬರು ಆರ್ಥಿಕವಾಗಿ ಸಬಲರಾಗಬೇಕು. ಸಿರಿಧಾನ್ಯ ಬಳಸಿ ತಯಾರಿಸಲಾದ ಉಪ್ಪಿನಕಾಯಿ, ಹಪ್ಪಳ, ಚಟ್ನಿಪುಡಿ, ಸಿಹಿ ಪದಾರ್ಥಗಳು, ಖಾರ ಪದಾರ್ಥಗಳು ಹಾಗೂ ಸಜ್ಜೆ ರೊಟ್ಟಿ, ಸಜ್ಜೆ ಕಡುಬು ಸೇರಿದಂತೆ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸುತ್ತಿದ್ದಾರೆ. ಆದರೆ ಅವರಿಗೆ ಸರಿಯಾಗಿ ಮಾರುಕಟ್ಟೆ ಪ್ರವೇಶ ಮಾಡುವುದು ತಿಳಿದಿರುವುದಿಲ್ಲ, ಇದನ್ನು ದೃಷ್ಟಿಯಾಗಿಟ್ಟುಕೊಂಡು ಜಿಲ್ಲೆಯಲ್ಲಿ ಪದಾರ್ಥಗಳನ್ನು ತಯಾರಿಸುವವರ ಹೆಸರುಗಳು ಅವರು ಮಾಡುವ ಖಾದ್ಯದ ವಿವರಗಳೊಂದಿಗೆ ಜಿಲ್ಲಾ ಪಂಚಾಯಿತಿ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ಇದರಿಂದ ಅವರು ಇಡೀ ರಾಜ್ಯ, ದೇಶದಲ್ಲಿ ಹೆಸರು ಗಳಿಸಲು ಮತ್ತು ಮಾರುಕಟ್ಟೆಯನ್ನು ಪ್ರವೇಶ ಮಾಡಲು ಅನುಕೂಲವಾಗುತ್ತದೆ. ಇದರಿಂದ ನೀವು ಉದ್ಯೋಗ ಹುಡುಕುವುದು ತಪ್ಪುತ್ತದೆ. ಹಾಗೂ ನೀವೇ ಉದ್ಯೋಗ ನೀಡುವ ಸಾಮಥ್ರ್ಯ ವೃದ್ಧಿಸಿಕೊಳ್ಳಬೇಕು ಎಂದರು.

Prize distribution to the winners of the cooking competition CEO Gitte Madhava Vithalrao
Prize distribution to the winners of the cooking competition CEO Gitte Madhava Vithalrao

ಪಿಜ್ಜಾ ಬರ್ಗರ್ ಫಾಸ್ಟ್ ಪುಡ್‍ಗಿಂತ ಉತ್ತಮ ಗುಣಮಟ್ಟ ಮತ್ತು ಹೆಚ್ಚು ಪೆÇೀಷಕಾಂಶ ಹೊಂದಿದ ಸಿರಿಧಾನ್ಯ ಪದಾರ್ಥಗಳನ್ನು ಪ್ರತಿಯೊಬ್ಬರು ಸೇವಿಸಬೇಕು ಎಂದರು.

ಕೃಷಿ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಜಿಲ್ಲೆಯ 7 ತಾಲ್ಲೂಕುಗಳಿಂದ ಒಟ್ಟು 70 ಜನರು ಭಾಗವಹಿಸಿದ್ದಾರೆ. ಇತ್ತೀಚೆಗೆ ಜಿಲ್ಲೆಯಲ್ಲಿ ಅಡಿಕೆಯನ್ನು ಹೆಚ್ಚು ಬೆಳೆಯಲಾಗುತ್ತಿದೆ. ಆದ್ದರಿಂದ ಜಿಲ್ಲೆಯು ತೋಟಗಾರಿಕೆ ಜಿಲ್ಲಾಯಾಗುತ್ತಿದ್ದು, ಅಲ್ಲದೆ ಜಿಲ್ಲೆಯಲ್ಲಿ ರಾಗಿ, ಭತ್ತವನ್ನು ಬೆಳೆಯಲಾಗುತ್ತಿದೆ. ಅದರ ಜೊತೆಗೆ ಸಿರಿಧಾನ್ಯಗಳನ್ನು ಬೆಳೆಯಬೇಕು, ಸಿರಿಧಾನ್ಯ ಸೇವೆನೆಯಿಂದ ಆರೋಗ್ಯ ಜೀವನವನ್ನು ನಡೆಸಬಹುದು ಎಂದರು.ಇಂದು ಬೆಳೆಯುವ ಆಹಾರ ಪದಾರ್ಥಗಳಿಗೆ ಅನೇಕ ರೀತಿಯ ಔಷಧಗಳನ್ನು ಸಿಂಪಡಿಸುತ್ತಾರೆ. ಆದುದರಿಂದ ನಾವು ಸಿರಿಧಾನ್ಯ ಪದಾರ್ಥಗಳನ್ನು ಬಳಕೆ ಮಾಡಬೇಕು ಎಂದು ತಿಳಿಸಿದರು.

ಸಿರಿಧಾನ್ಯ ಸಿಹಿ ಖಾದ್ಯದಲ್ಲಿ ಹೊನ್ನಾಳಿ ಮಂಗಳಾ ಕೋಂ ಸೂರ್ಯನಾರಾಯಣ ಪ್ರಥಮ ಬಹುಮಾನ ಪಡೆದರು. ಜಗಳೂರಿನ ಸುನಂದಮ್ಮ ಕೋಂ ನಾಗೇಂದ್ರಪ್ಪ ದ್ವಿತೀಯ ಬಹುಮಾನ ಪಡೆದರು. ದಾವಣಗೆರೆಯ ಪೂಜಾ ಕೋಂ ಪ್ರಶಾಂತ್ ಎಂ.ವಿದ್ಯಾ ತೃತೀಯ ಬಹುಮಾನ ಪಡೆದರು.
ಮರೆತುಹೋದ ಖಾದ್ಯದಲ್ಲಿ ಜಗಳೂರಿನ ವೀರಮ್ಮ ಕೋಂ ಬಸವರಾಜಪ್ಪ ಪ್ರಥಮ ಬಹುಮಾನ ಪಡೆದರು. ನ್ಯಾಮತಿಯ ನೇತ್ರಾವತಿ ಕೋಂ ತಿಮ್ಮೇಶಪ್ಪ ದ್ವಿತೀಯ ಬಹುಮಾನ ಪಡೆದರು. ಜಗಳೂರಿನ ಕೆ.ಬಿ.ಮಂಗಳಮ್ಮ ಕೋಂ ಮಂಜುನಾಥ್ ತೃತೀಯ ಬಹುಮಾನ ಪಡೆದರು. ಸಿರಿಧಾನ್ಯ ಖಾರ ಖಾದ್ಯದಲ್ಲಿ ದಾವಣಗೆರೆಯ ಪೂರ್ಣಿಮ ಕೋಂ ರಮೇಶ್ ಬಾಬು ಪ್ರಥಮ, ದಾವಣಗೆರೆಯ ಸಿಂಧುಕುಮಾರಿ ದ್ವೀತಿಯ ಹಾಗೂ ದಾವಣಗೆರೆಯ ಸುನಂದ ವರ್ಣೇಕರ್ ತೃತೀಯ ಬಹುಮಾನ ಪಡೆದರು. ಉಪ ಕೃಷಿ ನಿರ್ದೇಶಕರಾದ ಅಶೋಕ್, ತಿಪ್ಪೇಸ್ವಾಮಿ, ರೇವಣ್ಣ ಸಿದ್ದೇಶ್ವರ್, ಸಹಾಯಕ ನಿರ್ದೇಶಕರುಗಳಾದ ಶ್ರೀಧರ್‍ಮೂರ್ತಿ, ತೀರ್ಪುಗಾರರಾಗಿ ಮೀನಾಕ್ಷಿ ಜೋತ್ಸನಾ ಶ್ರೀಕಾಂತ್, ಸುಧಾ, ಸುಪ್ರಿಯ, ಕೃಷಿಕ್ ಸಮಾಜದ ಶಾಮನೂರು ಶಿವಣ್ಣ, ಉಪಸ್ಥಿತರಿದ್ದರು.

Prize distribution to the winners of the cooking competition: CEO Gitte Madhava Vithalrao