ಶಿವಮೊಗ್ಗ: ಸ್ವಚ್ಛ ಭಾರತ್ ಮಿಷನ್(ನಗರ) 2.0 ಅಡಿಯಲ್ಲಿ ವೈಯಕ್ತಿಕ ಗೃಹ ಬಳಕೆಯ ಶೌಚಾಲಯ ನಿರ್ಮಾಣ ಮಾಡಲು ಫಲಾನುಭವಿ ಆಯ್ಕೆಗೆ ಶಿರಾಳಕೊಪ್ಪ ಪುರಸಭೆಯು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರು ಪಾನ್ ಕಾರ್ಡ್/ವೋಟರ್ ಐಡಿ/ ಪಾಸ್ಪೋರ್ಟ್ ಪ್ರತಿ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಎಪ್ರಿಲ್ 30 ರ ಸಂಜೆ 5.30 ಗಂಟೆಯೊಳಗೆ ಪುರಸಭೆ ಕಚೇರಿಯ ಆರೋಗ್ಯ ವಿಭಾಗವನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದು.

ಹಿಂದಿನ ಯಾವುದೇ ಯೋಜನೆ ಅಡಿಯಲ್ಲಿ ಒಂದು ಕುಟುಂಬವು ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಹಣವನ್ನು ಪಡೆದಿದ್ದರೆ, ಅದೇ ಕುಟುಂಬವು ಶೌಚಾಲಯಗಳಿಗೆಂದು ಮತ್ತೊಮ್ಮೆ ಹಣವನ್ನು ಪಡೆಯಲು ಅರ್ಹವಾಗಿರುವುದಿಲ್ಲ ಎಂದು ಶಿರಾಳಕೊಪ್ಪ ಪುರಸಭೆ ಅಧ್ಯಕ್ಷರು ತಿಳಿಸಿದ್ದಾರೆ.
ಏ.18 ರಂದು ವಿದ್ಯುತ್ ವ್ಯತ್ಯಯ : ಶಿವಮೊಗ್ಗ ನಗರ ಉಪ ವಿಭಾಗ-2ರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.18 ರಂದು ಬೆಳಗ್ಗೆ 09-00 ರಿಂದ ಸಂಜೆ 06.00ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಕೆ.ಹೆಚ್.ಬಿ. ಕಾಲೋನಿ, ಚಾಲುಕ್ಯನಗರ, ಆನಂದಗಿರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ: ಮೆಸ್ಕಾಂ ಜನ ಸಂಪರ್ಕ ಸಭೆ: ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ ಏ. 21 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ;9480841339.

Follow Me